- Advertisement -
- Advertisement -
ಕಾರ್ಕಳ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಕಳ ಮುಂಡ್ಲಿ ಎಂಬಲ್ಲಿ ಶನಿವಾರ ವರದಿಯಾಗಿದೆ. ಮೃತ ವ್ಯಕ್ತಿ ಕಾರ್ಕಳದ ಕಲ್ಲೊಟ್ಟೆ ನಿವಾಸಿ ಸತೀಶ್(45) ಎನ್ನಲಾಗಿದೆ.
ಸತೀಶ್ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆಯೇ ಕಾರಣವೆನ್ನಲಾಗಿದೆ. ಈ ಘಟನೆ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -