Monday, April 29, 2024
spot_imgspot_img
spot_imgspot_img

ಕಾರ್ಕಳ : ತಮ್ಮನ ಮನೆಗೆ ಬೆಂಕಿ ಹಚ್ಚಿ, ಕಾರಿನೊಳಗೆ ಪೆಟ್ರೋಲ್ ಸುರಿದು ಸಹೋದರ ಸಜೀವ ದಹನ

- Advertisement -G L Acharya panikkar
- Advertisement -

ಕಾರ್ಕಳ : ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ. ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಸಹೋದರಿ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ. ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!