- Advertisement -
- Advertisement -
ಕಾರ್ಕಳ: ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ.
ಚಾಲಕನು ಅಪಘಾತ ನಡೆಸಿ ಲಾರಿ ಸಮೇತ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸ್ಥಳೀಯರು ಲಾರಿಯನ್ನು ತಡೆಹಿಡಿದ್ದಾರೆ. ಆದರೆ ಚಾಲಕ ಲಾರಿಯಿಂದ ಇಳಿದು ಪಕ್ಕದ ಗುಡ್ಡದಿಂದ ಓಡಿ ಪರಾರಿಯಾಗಿದ್ದಾನೆ. ಸದ್ಯ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -