Monday, May 6, 2024
spot_imgspot_img
spot_imgspot_img

ಕಾರ್ಕಳ: ವಿಚಾರಣೆಗೆ ಇಬ್ಬರು ನಕ್ಸಲ್’ಗಳನ್ನು ಕಸ್ಟಡಿಗೆ ಪಡೆದ ಪೊಲೀಸರು.!

- Advertisement -G L Acharya panikkar
- Advertisement -

ಕಾರ್ಕಳ : ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ನಕ್ಸಲ್ ವಾದಿಗಳನ್ನು ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್‌ ಠಾಣಾ ವ್ಯಾಪ್ತಿಯ ಒಟ್ಟು 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ವಿಚಾರಣೆಗೊಳಪಡಿಸುವ ಸಲುವಾಗಿ ಇಂದು ಬೆಳಗ್ಗೆ ಭದ್ರತೆಯಲ್ಲಿ ಕರೆತರಲಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು 12 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದ್ದಾರೆ. ಕೃಷ್ಣಮೂರ್ತಿ, ಸಾವಿತ್ರಿ ಇರುವ ಠಾಣೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

- Advertisement -

Related news

error: Content is protected !!