Sunday, May 19, 2024
spot_imgspot_img
spot_imgspot_img

ಕಾರ್ಕಳ: ವಿದೇಶಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ವ್ಯಕ್ತಿ ಅಪಘಾತಕ್ಕೆ ಬಲಿ

- Advertisement -G L Acharya panikkar
- Advertisement -

ಕಾರ್ಕಳ: ಬಹೆರೈನ್ ನಲ್ಲಿ ಉದ್ಯೋಗದಲ್ಲಿದ್ದು ಕೆಲ ದಿನಗಳಲ್ಲೇ ಮತ್ತೆ ವಿದೇಶಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ವ್ಯಕ್ತಿಯೋರ್ವರು ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಹಿರ್ಗಾನದ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ ಕಾನಂಗಿ ಹಂಕರಬೆಟ್ಟು ನಿವಾಸಿ ಮನೋಹರ ಪೂಜಾರಿ(43ವ) ಎಂದು ಗುರುತಿಸಲಾಗಿದೆ.

ಮನೋಹರ ತನ್ನ ಬೈಕಿನಲ್ಲಿ ಬುಧವಾರ ಸಂಜೆ 7.30ರ ವೇಳೆಗೆ ಕಾರ್ಕಳ ಕಡೆಯಿಂದ ಹಿರ್ಗಾನ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಹೋಗುತ್ತಿದ್ದ ಬಸ್ಸಿಗೆ ಹಿಂದಿನಿಂದ ಬಂದು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮನೋಹರ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಮೃತ ಮನೋಹರ್ ಬಹೆರೈನ್ ನಲ್ಲೊ ಉದ್ಯೋಗದಲ್ಲಿದ್ದು ಕೆಲ ದಿನಗಳಲ್ಲೇ ವಿದೇಶಕ್ಕೆ ತೆರಳುವವರಿದ್ದರು. ಇದಕ್ಕೆಂದು ಕಾರ್ಕಳಕ್ಕೆ ಬಂದು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ದೈಹಿಕ ದೃಢತೆ ಪ್ರಮಾಣಪತ್ರ ತರಲು ಕಾರ್ಕಳಕ್ಕೆ ಹೋಗಿ ವಾಪಾಸು ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ.

- Advertisement -

Related news

error: Content is protected !!