Friday, May 3, 2024
spot_imgspot_img
spot_imgspot_img

ಕಾರ್ಕಳ: ಸುಟ್ಟು ಕರಕಲಾದ ದೇಹ ಪತ್ತೆ…! ಸಹಕಾರ್ಮಿಕ ನಾಪತ್ತೆ ; ಹಲವು ಅನುಮಾನಕ್ಕೆ ಕಾರಣ

- Advertisement -G L Acharya panikkar
- Advertisement -

ಕಾರ್ಕಳ: ಸುಟ್ಟು ಕರಕಲಾದ ಮೃತದೇಹವು ರಬ್ಬರ್ ತೋಟದಲ್ಲಿ ಪತ್ತೆಯಾಗಿದೆ. ಕಾರ್ಕಳದ ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಶವವನ್ನು ರಬ್ಬರ್‍ ತೋಟದ ಕಾರ್ಮಿಕ ಎನ್ನಲಾಗಿದ್ದು ಸಹ ಕಾರ್ಮಿಕ ನಾಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

ರಬ್ಬರ್ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ ಬುಧವಾರ ಪತ್ತೆಯಾಗಿದ್ದು, ಮೃತನನ್ನು ಇದೇ ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿರುವ ಕೇರಳ ಮಲಪ್ಪುರಂ ಮೂಲದ ಗೋಪಿ (60) ಎಂದು ಗುರುತಿಸಲಾಗಿದೆ. ಗೋಪಿ ಅವರೊಂದಿಗಿದ್ದ ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ನಾಪತ್ತೆಯಾದ ಕಾರ್ಮಿಕ.

ಉದ್ಯಮಿ ವಿವೇಕಾನಂದ ಶೆಣೈ ಅವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬವರ ಜೊತೆ ಕರಾರು ಮೂಲಕ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದರು.

ಅ. 19ರಂದು ಬೆಳಗ್ಗೆ 9 ಗಂಟೆಗೆ ವಸಂತ ಎಂಬವರು ಗ್ರಾಸ್ ಕಟ್ಟಿಂಗ್ ಮಾಡಲು ತೋಟದತ್ತ ಹೋದಾಗ ಅಲ್ಲಿ ಮೃತದೇಹ ಕಂಡುಬಂದಿದೆ. ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನ್ ಮುಚ್ಚಳ ಕಂಡು ಬಂದಿದೆ.

ಸಹ ಕಾರ್ಮಿಕ ನಾಪತ್ತೆ..!
ಗೋಪಿ ಅವರೊಂದಿಗಿದ್ದ ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಗೆ ಕರೆ ಮಾಡಿದಾಗ ಮೋಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಗೋಪಿ ಹಾಗೂ ಬಾಹುಲೇಯನ್ ಒಂದು ವಾರದ ಹಿಂದೆ ಊರಿಗೆ ಹೋಗಿದ್ದು ಕಳೆದ ಮಂಗಳವಾರ ವಾಪಾಸ್‌ ಬಂದು ಕೆಲಸಕ್ಕೆ ಹಾಜರಾಗಿರುತ್ತಾರೆ ಎಂದು ತಿಳಿದುಬಂದಿದೆ. ಬಾಹುಲೇಯನ್ ಕಾಣೆಯಾಗಿರುವುದು ಗೋಪಿಯ ಮರಣದಲ್ಲಿ ಹಲವು ಸಂಶಯ ಮೂಡಿಸಿದೆ. ಪ್ರಕರಣ ಭೇದಿಸುವ ನಿಟ್ಟಿನಲ್ಲಿ ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ವಿವೇಕಾನಂದ ಶೆಣೈ ಅವರನ್ನೂ ಠಾಣೆಗೆ ಕರೆದು ಪೊಲೀಸರು ತೀವು ವಿಚಾರಣೆ ನಡೆಸಿರುತ್ತಾರೆ.

- Advertisement -

Related news

error: Content is protected !!