- Advertisement -
- Advertisement -
ಕಾರ್ಕಳ: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ. ಇವರು ವೆಲ್ಡಿಂಗ್ ವರ್ಕ್ಶಾಪ್ನಲ್ಲಿ ಕೆಲಸ ಮಾಡಿಕೊಂಡಿದ್ದು , ಅದರ ಜೊತೆಗೆ ಹೈನುಗಾರಿಕೆಯನ್ನೂ ಕೂಡಾ ನಡೆಸುತ್ತಿದ್ದರು.
ಹೈನುದ್ಯಮದಲ್ಲಿ ನಷ್ಟವನ್ನು ಹೊಂದಿದ ಕಾರಣದಿಂದ ಶ್ರೀನಿವಾಸ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -