- Advertisement -
- Advertisement -
ವಿಜಯನಗರ: ಪುನೀತ್ ರಾಜಕುಮಾರ್ ಅಭಿಮಾನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟ ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿ ಕಾಲುವೆಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ.
ಹೊಸಪೇಟೆ ತಾಲೂಕಿನ ಕಮಲಾಪುರದ 16ನೇ ವಾರ್ಡ್ನ ಬಂಡಿಕೇರಿ ನಿವಾಸಿ ಸಾದಪ್ಪ (40) ಎಂಬಾತ ಮೃತ ಅಭಿಮಾನಿ. ಮೊದಲೇ ಮದ್ಯವ್ಯಸನಿ ಆಗಿದ್ದ ಈತ ಪುನೀತ್ ನಿಧನದ ಸುದ್ದಿ ಕೇಳಿ ಪೊಲೀಸ್ ಕ್ವಾಟ್ರಸ್ ಸಮೀಪದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪೊಲೀಸರು ಮೃತದೇಹ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
- Advertisement -