- Advertisement -
- Advertisement -
ಉಡುಪಿ: ಮಾರಿ ಪೂಜೆ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡುವ ಪತ್ರವೊಂದು ವೈರಲ್ ಆದ ಬಗ್ಗೆ ವರದಿಯಾಗಿದೆ.
ಮಾರ್ಚ್ 22,23 ರಂದು ನಡೆಯುವ ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ ಮುಸ್ಲಿಮರ ಅಂಗಡಿಗಳಿಗೆ ಅವಕಾಶ ನೀಡಬಾರದೆಂಬ ಪತ್ರ ಪುರಸಭೆಯ ಮುಖ್ಯಾಧಿಕಾರಿಗೆ ಬರೆಯಲಾಗಿದೆ. ಹಿಂದೂ ಕಾರ್ಯಕರ್ತರು ಈ ಪತ್ರವನ್ನು ಬರೆದು ಅಂಗಡಿ ಸ್ಟಾಲ್’ಗೆ ಅವಕಾಶ ನೀಡಬಾರದೆಂದು ಹೇಳಿದ್ದಾರೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪುರಸಭೆಯ ಅಧಿಕಾರಿ “ಮನವಿ ಬಂದಿರುವುದು ಹೌದು. ಆದರೆ ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಇಲ್ಲಿ ಎಲ್ಲರಿಗೂ ವ್ಯಾಪಾರ ಮಾಡುವ ಅವಕಾಶವಿದೆ” ಎಂದು ಹೇಳಿದ್ದಾರೆ.
- Advertisement -