- Advertisement -
- Advertisement -
ಕಾಸರಗೋಡು: ಗಲ್ಫ್ ಉದ್ಯೋಗಿ ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ.
ಪೈವಳಿಕೆ ಪಳ್ಳಿಕೂಡಲ್ ನ ಅಬ್ದುಲ್ ಜಲೀಲ್ ಬಂಧಿತ ಆರೋಪಿ.
ಕೃತ್ಯದ ಬಳಿಕ ಆರೋಪಿ ಅಬ್ದುಲ್ ಜಲೀಲ್ ವಿದೇಶಕ್ಕೆ ಪರಾರಿಯಾಗಿದ್ದು, ಊರಿಗೆ ಮರಳುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಕಣ್ಣೂರು ವಿಮಾನ ನಿಲ್ದಾಣದಿಂದ ಈತನನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಎಂಟು ಜನರನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ನೇರವಾಗಿ ಶಾಮೀಲಾದ ಹಾಗೂ ಸಂಚು ರೂಪಿಸಿದವರು ಸೇರಿದಂತೆ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
- Advertisement -