Thursday, April 25, 2024
spot_imgspot_img
spot_imgspot_img

ಕಾಸರಗೋಡು: ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -

ಕಾಸರಗೋಡು: ಅಬಕಾರಿ ದಳದ ವಾಹನಕ್ಕೆ ಕಾರು ಢಿಕ್ಕಿ ಹೊಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

vtv vitla
vtv vitla

ಬಂದ್ಯೋಡು ಮುಟ್ಟಗೇಟ್ ನ ರಕ್ಷಿತ್ ( 23) ಬಂಧಿತ ಆರೋಪಿ. ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ರಕ್ಷಿತ್ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಆದರೆ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೇ 20ರಂದು ರಾತ್ರಿ ಉಪ್ಪಳ ಸಮೀಪದ ಸೊಂಕಾಲ್‌ನಲ್ಲಿ ಕಾರನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚನೆ ನೀಡಿದಾಗ ಅಬಕಾರಿ ದಳದ ವಾಹನಕ್ಕೆ ಢಿಕ್ಕಿ ಹೊಡೆಸಿ ಪರಾರಿಯಾಗಲೆತ್ನಿಸಿದ್ದ. ಈ ಸಂದರ್ಭದಲ್ಲಿ ಮೂವರು ಅಬಕಾರಿ ದಳದ ಸಿಬಂದಿ ಸೇರಿದಂತೆ ಐವರು ಗಾಯಗೊಂಡಿದ್ದರು. ಗಾಯಗೊಂಡ ರಕ್ಷಿತ್ ಮತ್ತು ರೆಜಿನ್‌ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು .ಆಸ್ಪತ್ರೆಯಿಂದ ರಕ್ಷಿತ್ ಪರಾರಿಯಾಗಿದ್ದನು. ಕಾರಿನಿಂದ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು.

- Advertisement -

Related news

error: Content is protected !!