- Advertisement -
- Advertisement -
ಕಾಸರಗೋಡು: ಅಮ್ಮನ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಮಗುವಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ಹೃದಯಾವಿದ್ರಾವಕ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ.
ಸೀತಾಂಗೋಳಿಯ ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ ಬಾಲಕ.
ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ಡಿಕ್ಕಿಯಾದ ವೇಳೆ ಮಗುವಿನ ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
- Advertisement -