Saturday, May 4, 2024
spot_imgspot_img
spot_imgspot_img

ಕಾಸರಗೋಡು: ಗೋವಾಕ್ಕೆ ತೆರಳುತ್ತಿದ್ದ ಯುವಕ ರೈಲಿನಿಂದ ಎಸೆಯಲ್ಪಟ್ಟು ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು: ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದು, ಈ ವೇಳೆ ಯುವಕನೊಬ್ಬ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ನಿವಾಸಿ ಸಾಬೀರ್(32) ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಗೋವಾಕ್ಕೆ ತಲಪಿದಾಗ ಸ್ನೇಹಿತನು ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದು, ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಕುಂಬಳೆ ಪೊಲೀಸ್ ಠಾಣೆಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು,
ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!