- Advertisement -
- Advertisement -
ಗಡಿ ಹೊರವಲಯದ ಕಾಸರಗೋಡಿನಲ್ಲಿರುವ ಸುಲ್ತಾನ್ ಜ್ಯುವೆಲ್ಲರಿ ಉದ್ಯೋಗಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಸುಲ್ತಾನ್ ಜ್ಯುವೆಲ್ಲರಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ ವಂಚಸಿಲಾಗಿದೆ.
ಈ ಕುರಿತು ಹಿರಿಯ ಉದ್ಯೋಗಿಯೋರ್ವರು ಕಾಸರಗೋಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಇದರಲ್ಲಿ
ಮಂಗಳೂರು ಬಿಸಿ ರೋಡ್ ನಿವಾಸಿ ಮುಹಮ್ಮದ್ ಫಾರೂಕ್ ಎಂಬಾತ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು ಒಂದೂವರೆ ವರ್ಷದಲ್ಲಿ ನೌಕರ ಸುಲ್ತಾನ್ ಜ್ಯುವೆಲ್ಲರಿಯಿಂದ ಸುಮಾರು 2. 5 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ ದೋಚಿದ್ದಾನೆ. ಜುವೆಲ್ಲರಿ ಲೆಕ್ಕ ಪರಿಶೋಧನೆ ಮಾಡಿದ ಸಂದರ್ಭ ಕಳವು ಪ್ರಕರಣ ಬೆಳಕಿಗೆ ಬಂದಿದೆ.
- Advertisement -