Sunday, May 19, 2024
spot_imgspot_img
spot_imgspot_img

ಕಾಸರಗೋಡು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ; ಕಾಂಗ್ರೆಸ್ ಮುಖಂಡ ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ಕಾಞ೦ಗಾಡ್ ನ ಮಣಿಯಾಟ್ ನಲ್ಲಿ ನಡೆದಿದೆ.

ಕಾಞ೦ಗಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ವಿ. ಬಾಲಕೃಷ್ಣನ್(64) ಮೃತಪಟ್ಟವರು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ತಂತಿ ತಗಲಿ ದುರ್ಘಟನೆ ನಡೆದಿದೆ. ಸಂಜೆ ಭಾರೀ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿದ್ದು ಈ ರಸ್ತೆಯಾಗಿ ಬರುತ್ತಿದ್ದ ಬಾಲಕೃಷ್ಣನ್ ಅವರ ಸ್ಕೂಟರ್ ತಂತಿಗೆ ತಗುಲಿ ಶಾಕ್ ಉಂಟಾಗಿ ಈ ಘಟನೆ ನಡೆದಿದೆ.

vtv vitla
vtv vitla

ಜೊತೆಗಿದ್ದ ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ. ಬಾಲಕೃಷ್ಣನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳ ಮನೆಗೆ ಬಂದುಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

- Advertisement -

Related news

error: Content is protected !!