Thursday, April 25, 2024
spot_imgspot_img
spot_imgspot_img

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಪರಾರಿಯಾಗಿದ್ದ ಆರೋಪಿಯ ಬಂಧನ

- Advertisement -G L Acharya panikkar
- Advertisement -

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾಗ ಪೊಲೀಸರ ಗಮನ ಬೇರೆಡೆ ಸೆಳೆದು ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬೆಂಗಳೂರಿನಲ್ಲಿ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾನಗರ ಠಾಣಾ ವ್ಯಾಪ್ತಿಯ ಆಲಂಪಾಡಿಯ ಅಮೀರ್ ಅಲಿ ಬಂಧಿತ ಆರೋಪಿ. ಮಾದಕ ವಸ್ತು ಸಾಗಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಅಮೀರ್ ಅಲಿಯನ್ನು ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ಮೇ 12ರಂದು ಬದಿಯಡ್ಕದಲ್ಲಿ ಬಂಧಿಸಲಾಗಿತ್ತು. ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಆತನನ್ನು ಮೇ 23ರಂದು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಕಾಸರಗೋಡು ವಿದ್ಯಾನಗರ ಬಳಿ ಪೊಲೀಸರ ಗಮನ ಬೇರೆಡೆ ಸೆಳೆದು ಈತ ಪರಾರಿಯಾಗಿದ್ದ. ತನಿಖೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

- Advertisement -

Related news

error: Content is protected !!