ಕಾಸರಗೋಡು: ಇಲ್ಲಿನ ಪೆರ್ಲಡ್ಕದಲ್ಲಿ ಪತ್ನಿಯನ್ನೇ ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ನಡೆದಿದ್ದು, ಸೋಮವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದೆ. ಕೊಲೆಯಾದವರು ಪೆರ್ಲಡ್ಕ ಪೇಟೆಯ ಕ್ವಾಟರ್ಸ್ನಲ್ಲಿ ವಾಸವಾಗಿರುವ ಉಷಾ (35) ಎನ್ನಲಾಗಿದೆ.
ಡಿ.5ರ ಭಾನುವಾರ ರಾತ್ರಿ ಪತಿ ಅಶೋಕ್ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಪತಿ ಅಶೋಕ್ ಅನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಅಯ್ಯಪ್ಪ ವ್ರತಧಾರಿಯಾಗಿದ್ದ ಅಶೋಕ್ ಬೆಳಿಗ್ಗೆ ಭಜನಾ ಮಂದಿರಕ್ಕೆ ತಲುಪದ ಹಿನ್ನಲೆಯಲ್ಲಿ ಸ್ನೇಹಿತರು ಕ್ವಾಟರ್ಸ್ಗೆ ತಲುಪಿದಾಗ ಕೃತ್ಯ ಬೆಳಕಿಗೆ ಬಂದಿದೆ, ಕ್ವಾಟರ್ಸ್ಗೆ ಬೀಗ ಜಡಿದ ಸ್ಥಿತಿಯಲ್ಲಿತ್ತು. ಕಿಟಕಿ ಮೂಲಕ ಗಮನಿಸಿದಾಗ ಮಹಿಳೆ ಕೊಲೆಯಾಗಿದ್ದರು. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.
ಕೃತ್ಯದ ಬಳಿಕ ಕ್ಯಾಟರ್ಸ್ಗೆ ಬೀಗ ಹಾಕಿ ಅಲ್ಲಿಂದ ತೆರಳಿದ ಅಶೋಕ್ ಅನ್ನು ಇಂದು ಬೆಳಗ್ಗೆ ಕಾಸರಗೋಡು ರೈಲ್ವೆ ನಿಲ್ದಾಣ ಪರಿಸರದಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮೃತದೇಹದ ಮಹಜರು ನಡೆಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೃತ್ಯಕ್ಕೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.