Tuesday, May 7, 2024
spot_imgspot_img
spot_imgspot_img

ಕಾಸರಗೋಡು: ಬಸ್ಸಿನಲ್ಲಿ ಸಾಗಿಸುತ್ತಿದ್ದ 30 ಲಕ್ಷ ರೂ. ಹವಾಲ ಹಣ ಸಹಿತ ಓರ್ವ ವಶಕ್ಕೆ

- Advertisement -G L Acharya panikkar
- Advertisement -

ಕಾಸರಗೋಡು: ಬಸ್ಸಿನಲ್ಲಿ ಕೊಂಡೊಯ್ಯಲಾಗುತ್ತಿದ್ದ ಸುಮಾರು 30 ಲಕ್ಷ ರೂ. ಹವಾಲ ಹಣವನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರ ಮೂಲದ ಶರದ್ ದಾಬಡೆ ( 22) ಬಂಧಿತ. ಶುಕ್ರವಾರ ಬೆಳಿಗ್ಗೆ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ. ಹಣಕ್ಕೆ ಯಾವುದೇ ದಾಖಲೆ ಪತ್ರಗಳಿರಲಿಲ್ಲ . ಮಲಪ್ಪುರಂ ಮಂಜೇರಿಯ ಜುವೆಲ್ಲರಿ ಗೆ ಹಣ ಕೊಂಡೊಯ್ಯುತ್ತಿದ್ದುದಾಗಿ ಈತ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಬ್ಯಾಗ್ ನಲ್ಲಿ ಬಟ್ಟೆಯಲ್ಲಿ ಸುತ್ತಿ ಹಣವನ್ನು ಬಚ್ಚಿಟ್ಟು ಸಾಗಿಸುತ್ತಿದ್ದನು 500 ರೂ . ಗಳ 21 ಲಕ್ಷ ರೂ . ಹಾಗೂ 2 ಸಾವಿರ ರೂ .ಗಳ ಒಂಭತ್ತು ಲಕ್ಷ ರೂ . ನೋಟುಗಳು ಇದರಲ್ಲಿತ್ತು ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಗಾಗಿ ಶರದ್ ದಾಬಡೆಯನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆದಾಯ ಇಲಾಖೆಯೂ ತನಿಖೆ ನಡೆಸುತ್ತಿದೆ.

- Advertisement -

Related news

error: Content is protected !!