Friday, April 19, 2024
spot_imgspot_img
spot_imgspot_img

ಕಾಸರಗೋಡು: ಮನೆಯವರ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಮತ್ತು ನಗದು ಕಳವು

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚಕ್ಕಾಡ್ ನಲ್ಲಿ ನಡೆದಿದೆ.

ಪೂಚಕ್ಕಾಡ್ ಮುನೀರ್ ಎಂಬವರ ಮನೆಯ ಮೇಲಂತಸ್ತಿನ ಕಿಟಿಕಿ ಸರಳು ಮುರಿದು ಕಳ್ಳರು ಒಳನುಗ್ಗಿದ್ದು, ಕಪಾಟಿನಲ್ಲಿ ಇರಿಸಲಾಗಿದ್ದ ಚಿನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಮುನೀರ್ ಹಾಗೂ ಮನೆಯವರು ಮನೆಯಲ್ಲಿ ಮಲಗಿದ್ದು, ಬೆಳಿಗ್ಗೆ ತಡವಾಗಿ ಎಚ್ಚೆತ್ತಿದ್ದು, ಈ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ.

ಕಳ್ಳರು ಪ್ರಜ್ಞೆ ತಪ್ಪಿಸುವ ರಾಸಾಯನಿಕ ವಸ್ತು ಸಿಂಪಡಿಸಿರಬಹುದು ಎಂದು ಶಂಕಿಸಲಾಗಿದೆ. ಸಾಮಾನ್ಯವಾಗಿ ಮುನೀರ್ ಮುಂಜಾನೆ 4 ಗಂಟೆಗೆ ಏಳುತ್ತಿದ್ದು, ಇಂದು ಬೆಳಿಗ್ಗೆ ಎಂಟು ಗಂಟೆಗೆ ಎಚ್ಚರವಾಗಿದೆ. ಇದರಿಂದ ಪ್ರಜ್ಞೆ ತಪ್ಪಿಸುವ ರಾಸಾಯನಿಕ ಸ್ಪ್ರೇ ಮಾಡಿ ಕಳ್ಳರು ಕೃತ್ಯ ನಡೆಸಿರಬಹುದು ಎಂದು ಸಂಶಯಿಸಲಾಗಿದೆ.

ಇನ್ನು ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!