Friday, April 26, 2024
spot_imgspot_img
spot_imgspot_img

ಕಾಸರಗೋಡು: ಮೂಖ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ; ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ

- Advertisement -G L Acharya panikkar
- Advertisement -

ಕಾಸರಗೋಡು: ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಫು ನೀಡಿದೆ.

ಜೀವಾವಧಿ ಸಜೆ ಅಲ್ಲದೆ ಹೆಚ್ಚುವರಿಯಾಗಿ ಹತ್ತು ವರ್ಷ ಸಜೆ ನೀಡಿ ತೀರ್ಫು ನೀಡಿದೆ . ದಂಡ ಪಾವತಿಸದಿದ್ದಲ್ಲಿ 8 ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು. ಸಂತ್ರಸ್ತೆ ಬಾಲಕಿಗೆ ನಷ್ಟ ಪರಿಹಾರ ನೀಡಲು ನ್ಯಾಯಾಲಯ ನಿರ್ದೇಶನ ನೀಡಿದೆ.

ಉಪ್ಪಳ ಮಣಿಮುಂಡದ ಸುರೇಶ್ (45) ಎಂಬಾತನಿಗೆ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ (ಒಂದು) ನ್ಯಾಯಾಲಯದ ನ್ಯಾಯಾಧೀಶ ಎ ಮನೋಜ್ ಶಿಕ್ಷೆ ವಿಧಿಸಿದ್ದಾರೆ. ಈ ಹಿಂದೆ ನ್ಯಾಯಾಲಯ ಸುರೇಶ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. 2015 ರ ಸೆಪ್ಟ0ಬರ್ 22 ರಂದು ಕೃತ್ಯ ನಡೆದಿತ್ತು.

ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ತಂದೆ ತಾಯಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಕುಡಿಯಲು ನೀರು ಕೇಳಿಕೊಂಡು ಮನೆಗೆ ಬಂದಿದ್ದ ಈತ ಬಾಲಕಿ ನೀರು ತರಲು ಒಳಗಡೆ ತೆರಳಿದ್ದ ಸಂದರ್ಭದಲ್ಲಿ ಕಟ್ಟಿ ಹಾಕಿ ಕೃತ್ಯ ನಡೆಸಿ ದ್ದನು. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಅಕ್ಟೋ ಬರ್ 13 ರಂದು ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳೂರಿನಿಂದ ಬಂಧಿಸಿದ್ದರು. ಪ್ರಾಸಿಕ್ಯೂಷನ್ ಪರ ಸ್ಪೆಷಲ್ ಪ್ರಾಸಿಕ್ಯೂಟರ್ ಪ್ರಕಾಶ್ ಅಮ್ಮಣ್ಣಾಯ ಹಾಜರಾದರು.
ಒಟ್ಟು 34 ಸಾಕ್ಷಿಗಳಲ್ಲಿ 25 ವಿಸ್ತರಿಸಲಾಗಿತ್ತು

- Advertisement -

Related news

error: Content is protected !!