Sunday, May 5, 2024
spot_imgspot_img
spot_imgspot_img

ಕಾಸರಗೋಡು: ಮೊಬೈಲ್ ಲಾಕ್ ತೆಗೆಯಲು ಮೊಬೈಲ್ ಮಳಿಗೆಗೆ ಹೋದಾಗ ಸಿಕ್ಕಿ ಬಿದ್ದ ಕಳ್ಳ

- Advertisement -G L Acharya panikkar
- Advertisement -

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆಗೆಯಲು ಮೊಬೈಲ್ ಮಳಿಗೆಗೆ ಹೋದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ.

ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾನ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ ತೆರಳಿದ್ದಾನೆ. ಈತನ ವರ್ತನೆ ಬಗ್ಗೆ ಸಂಶಯಗೊಂಡ ಮೊಬೈಲ್ ಮಳಿಗೆಯ ಮಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಸ್ಥಳಕ್ಕೆ ಬಂದ ಪೊಲೀಸರು ಮೊಬೈಲ್ ಅನ್ನು ಪರಿಶೀಲಿಸಿ ಯುವಕನನ್ನು ವಿಚಾರಣೆ ನಡೆಸಿದಾಗ ಮೊಬೈಲ್ ಅನ್ನು ಕಳವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

- Advertisement -

Related news

error: Content is protected !!