Sunday, April 28, 2024
spot_imgspot_img
spot_imgspot_img

ಕಾಸರಗೋಡು: ರಸ್ತೆ ಬದಿ‌ ನಿಂತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆಸೆದ ಭೂಪ; ಮಾದಕ‌ ವ್ಯಸನಿಯ ದುಷ್ಕೃತ್ಯ..?

- Advertisement -G L Acharya panikkar
- Advertisement -

ಕಾಸರಗೋಡು: ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕಿಯನ್ನು ಯುವಕನೊಬ್ಬ ಎತ್ತಿ ನೆಲಕ್ಕೆ ಎಸೆದ ಘಟನೆ ನಡೆದಿದೆ. ಮಂಜೇಶ್ವರ ಉದ್ಯಾವರ ಬಳಿ ಈ ಘಟನೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ.

ಕುಂಜತ್ತೂರು ಮೂಲದ ಅಬೂಬಕರ್ ಸಿದ್ದಿಕಿ ಎಂಬಾತ ಒಂಬತ್ತು ವರ್ಷದ ಬಾಲಕಿಯನ್ನು ಅಮಾನುಷವಾಗಿ ನೆಲಕ್ಕೆ ಎಸೆದಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಘಟನೆಯ ವಿಡಿಯೋ ದೃಶ್ಯಾವಳಿಗಳು ವ್ಯಾಪಕವಾಗಿ ಹರಡುತ್ತಿವೆ.

ರಸ್ತೆಯಲ್ಲಿ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯನ್ನು ಯಾವುದೇ ಪ್ರಚೋದನೆ ಇಲ್ಲದೆ ಎತ್ತಿ ನೆಲಕ್ಕೆ ಎಸೆದಿದ್ದಾನೆ. ನಿಧಾನವಾಗಿ ಮಗುವಿನ ಕಡೆಗೆ ನಡೆದ ಅವನು ಬಾಲಕಿಯನ್ನು ಎತ್ತಿಕೊಂಡು ನೆಲದ ಮೇಲೆ ಎಸೆದನು. ಆ ನಂತರ ಏನೂ ಆಗಿಲ್ಲ ಎಂಬಂತೆ ಹಿಂದೆ ಸರಿದನು. ಗಾಯಗೊಂಡ ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕಿಯ ಪೋಷಕರು ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಆರೋಪಿ ಮಾದಕ ವಸ್ತು ವ್ಯಸನಿ ಎಂದೂ ತಿಳಿದು ಬಂದಿದೆ.

- Advertisement -

Related news

error: Content is protected !!