- Advertisement -
- Advertisement -




ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ನಡೆದಿದೆ.
ಚಂದ್ರಗಿರಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ 18 ವರ್ಷ ಪ್ರಾಯದ ಅಶ್ಪಾಕ್ ಮೃತಪಟ್ಟ ವಿದ್ಯಾರ್ಥಿ. ಬೇಕಲ ಮವ್ವಾಲ್ ನಿವಾಸಿಯಾಗಿದ್ದ ಈತ ಸೋಮವಾರ ತಡರಾತ್ರಿ 12 ಗಂಟೆ ವೇಳೆಗೆ ಫುಟ್ಭಾಲ್ ಆಟ ಮುಗಿಸಿ ಸ್ನೇಹಿತರ ಜತೆಗೆ ಮನೆಗೆ ಹಿಂತಿರುಗುತ್ತಿದ್ದಾಗ ಪಳ್ಳಿಕೆರೆ ಜಂಕ್ಷನ್ ಬಳಿ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ತೀವ್ರ ಗಾಯಗೊಂಡ ಅಶ್ಪಾಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಅತನ ಜತೆಗಿದ್ದ ಇನ್ನಿಬ್ಬರು ತೀವ್ರ ಗಾಯಗೊಂಡಿದ್ದು , ಅವರನ್ನು ಕಾಂಞಂಗಾಡ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪ ತ್ರೆಗೆ ದಾಖಲಿಸಲಾಗಿದೆ. ಬೇಕಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- Advertisement -