- Advertisement -
- Advertisement -
ಕಾಸರಗೋಡು: ಸ್ನೇಹಿತರ ಜೊತೆ ಕೆರೆಗೆ ಸ್ನಾನಕ್ಕೆ ಹೋಗಿದ್ದ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಕುಂಬಳೆ ಠಾಣಾ ವ್ಯಾಪ್ತಿಯ ಬಂದ್ಯೋಡು ಸಮೀಪದ ಇಂಚ್ಲಗೋಡು ಎಂಬಲ್ಲಿ ನಡೆದಿದೆ.
ಕುಂಬಳೆ ಮಾವಿನಕಟ್ಟೆ ನಿವಾಸಿ ಝುನುದ್ದೀನ್ ಎಂಬವರ ಪುತ್ರಿ ಸಿನಾನ್(20) ಮೃತಪಟ್ಟ ಯುವಕ.
ಇಚ್ಲಂಗೋಡು ಚಿನ್ನ ಮೊಗರ್ ಎಂಬಲ್ಲಿ ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜೊತೆಯಲ್ಲಿದ್ದವರು ಹಾಗೂ ಸ್ಥಳೀಯರು ಸೇರಿ ಸಿನಾನ್ ನನ್ನು ರಕ್ಷಿಸಿ ಆಸ್ಪತ್ರೆಗೆ ರವಾಸಿದರೂ ಅದಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಿದರು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -