Sunday, June 29, 2025
spot_imgspot_img
spot_imgspot_img

ಕಾಸರಗೋಡು: ಹಲವಾರು ಪ್ರಕರಣಗಳಲ್ಲಿ ಶಾಮೀಲಾಗಿದ್ದ ಆರೋಪಿಯ ವಿರುದ್ಧ ಕಾಫಾ ಕಾಯ್ದೆ ದಾಖಲು!

- Advertisement -
- Advertisement -

ಕಾಸರಗೋಡು: ಕೊಲೆ ಯತ್ನ, ಗಾಂಜಾ ಸಾಗಾಟ, ಮಾರಾಟ, ಅಪಹರಣ ಪ್ರಕರಣದ ಆರೋಪಿ ಉಳಿಯತ್ತಡ್ಕ ಬಿಲಾಲ್ ನಗರದ ಅಬ್ದುಲ್ ಸಮದ್ (28)ನ ವಿರುದ್ಧ ವಿರುದ್ಧ ಕಾಸರಗೋಡು ಕಾಫಾ ಕಾಯ್ದೆಯನ್ನು ಹೂಡಿದ್ದಾರೆ.

ಈತನ ವಿರುದ್ಧ 20 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರ ವರದಿಯಂತೆ ಜಿಲ್ಲಾಧಿಕಾರಿರವರು ಕಾಫಾ ಕಾಯ್ದೆಯನ್ನು ಹೂಡಿದ್ದಾರೆ. ಕಾಸರಗೋಡು, ವಿದ್ಯಾನಗರ, ಬದಿಯಡ್ಕ, ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳು ಈತನ ಮೇಲಿದ್ದು, ಗಾಂಜಾ, ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಗಳು ಪ್ರಮುಖ ಆರೋಪಿಯಾಗಿದ್ದಾನೆ.

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ 28 ಕಿಲೋ ಗಾಂಜಾ ವಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮದ್ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಇದಲ್ಲದೆ ಮಾದಕ ವಸ್ತು ಸಾಗಾಟ, ಕೊಲೆ ಯತ್ನ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣ ಗಳಲ್ಲಿ ಈತ ಆರೋಪಿ ಯಾಗಿದ್ದು, ಈ ಹಿನ್ನಲೆಯಲ್ಲಿ ಈತನ ವಿರುದ್ಧ ಗೂಂಡಾ ಕಾಯಿದೆ ಯಾದ ಕಾಫಾ ವನ್ನು ಹೂಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!