- Advertisement -
- Advertisement -
ಕಾಸರಗೋಡು: ಮೂರು ಕಾರುಗಳ ನಡುವಿನ ಸರಣಿ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡವರು ಮೊಗ್ರಾಲ್ ಪುತ್ತೂರಿನ ಜಗದೀಶ್ (30) ಬಾಲಕೃಷ್ಣ (50) ಮತ್ತು ಬದ್ರಿಯಾ ನಗರದ ಮುರ್ಷಿದ್ (22) ಎನ್ನಲಾಗಿದೆ.
ಕುಂಬಳೆ ಕಡೆಗೆ ತೆರಳುತ್ತಿದ್ದ ಆ ಕಾರಿಗೆ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬಂದ ವ್ಯಾಗನರ್ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -