Friday, April 26, 2024
spot_imgspot_img
spot_imgspot_img

ಕುಂದಾಪುರ: ಕಾರು ಅಪಘಾತ; ದಂಪತಿ ಸಾವು..!

- Advertisement -G L Acharya panikkar
- Advertisement -

ಕುಂದಾಪುರ: ಕುಂದಾಪುರ ವಿನಾಯಕ ಚಿತ್ರಮಂದಿರದ ಬಳಿ ನಡೆದ ಅಪಘಾತದಲ್ಲಿ ವೃದ್ದ ದಂಪತಿ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ.

ಕಾರು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಕುಂದಾಪುರದ ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಿಂದ ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಮಂಜುನಾಥ ವಿರುದ್ಧ ಪ್ರಕರಣ ದಾಖಲಾಗಿದೆ‌.

- Advertisement -

Related news

error: Content is protected !!