Tuesday, May 7, 2024
spot_imgspot_img
spot_imgspot_img

ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಪಿ.ಯು.ಸಿ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -
vtv vitla

ಕೋಟ: ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದ ನಿವಾಸಿ ದಿ. ಶಾಬು ಸಾಹೇಬ್‌ರ 2ನೇ ಮಗಳು ಮಿಸ್ರಿಯಾ ಕುಂದಾಪುರ ಬ್ಯಾರೀಸ್‌ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿಕೊಂಡಿದ್ದು ಎಂದಿನಂತೆ ಜೂನ್ 27 ರಂದು ಬೆಳಿಗ್ಗೆ ಕಾಲೇಜಿಗೆ ತೆರಳಿ ಸಂಜೆ 5 ಗಂಟೆಗೆ ಹಿಂತಿರುಗಿ ತಲೆನೋವು ಇದೆ ಎಂದು ಹೇಳಿ ಕೋಣೆಗೆ ಹೋಗಿ ಮಲಗಿದ್ದಾಳೆ.

ಸಂಜೆ 7 ಗಂಟೆಗೆ ಅವರ ಸಂಬಂಧಿ ಸಯ್ಯದ್ ಬ್ಯಾರಿ ಮತ್ತು ಅವರ ಕಿರಿಯ ಮಗಳು ಕೋಣೆಯ ಬಾಗಿಲು ತೆರೆದು ನೋಡಿದಾಗ ಕೋಣೆಯಲ್ಲಿ ತಲೆನೋವು ಎಂದು ಮಲಗಿದ್ದ ಮಿಸ್ರಿಯಾಳು ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಬ್ಬರು ಸೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ಧೃಡಪಡಿಸಿರುತ್ತಾರೆ. ಮಿಸ್ರಿಯಾ ಯಾವುದೋ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!