- Advertisement -
- Advertisement -
ಕುಂದಾಪುರ: ಸ್ವಂತ ಮಗನೇ ಜನ್ಮ ನೀಡಿದ ತಂದೆಯನ್ನು ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು ಗುರುತಿಸಲಾಗಿದೆ.
ಪುತ್ರ ರಾಘವೇಂದ್ರ (36) ಎಂದು ಕೊಲೆಯ ಆರೋಪಿ. ಕೌಟುಂಬಿಕ ದ್ವೇಷ ಹಿನ್ನೆಲೆಯಲ್ಲಿ ತಂದೆಯನ್ನೇ ಸಣ್ಣ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -