- Advertisement -
- Advertisement -
ಕಡಬ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33ವ.)ಎಂಬವರು ಹೆಬ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಆನಂದ ಗೌಡ ಮೂರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು. ಅಲ್ಲದೆ ಹೊಸ ಕಾರನ್ನು ಖರೀದಿಸಿದ್ದರು ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ತಾವು ವಾಸವಿದ್ದ ಮನೆಯ ಅಡುಗೆ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
- Advertisement -