- Advertisement -
- Advertisement -
ಸುಬ್ರಹ್ಮಣ್ಯ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬುಧವಾರದಂದು ಭೇಟಿ ನೀಡಿದ್ದಾರೆ.
ಸುಬ್ರಹ್ಮಣ್ಯದ ವಿವಿಐಪಿ ಗೆಸ್ಟ್ ಹೌಸ್ ನಲ್ಲಿ ಕಾರ್ಯಕರ್ತರು, ಪಕ್ಷದ ಪ್ರಮುಖರ ಸಭೆ ನಡೆಸಿದ ಅವರು ಪಕ್ಷ ಸಂಘಟನೆಯನ್ನು ಗ್ರಾಮಮಟ್ಟದಲ್ಲಿಯೇ ಬಲ ಪಡಿಸುವ ಬಗ್ಗೆ ಚರ್ಚಿಸಿದರು. ಬಳಿಕ ಕ್ಷೇತ್ರದಲ್ಲಿ ದೇವರ ದರ್ಶನ ಪಡೆದರು.
ಸುಬ್ರಹ್ಮಣ್ಯದಲ್ಲಿನ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಖಾವಂದರನ್ನೂ ಭೇಟಿ ಮಾಡಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದರು.
- Advertisement -