Friday, April 26, 2024
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಭೇಟಿ

- Advertisement -G L Acharya panikkar
- Advertisement -

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಭೇಟಿ ನೀಡಿದ್ದಾರೆ. ದೇವಳದಿಂದ ಮತ್ತು ಜಿಲ್ಲಾಡಳಿತದಿಂದ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳಕ್ಕೆ ಆಗಮಿಸಿದ ರಾಜ್ಯಪಾಲರನ್ನು ದೇವಳದ ಗಜರಾಣಿ ‘ಯಶಸ್ವಿ’ ತನ್ನ ಸೊಂಡಿಲಿನಿಂದ ನಮಸ್ಕರಿಸಿ ಸ್ವಾಗತಿಸಿತು.

ಆಡಳಿತ ಮಂಡಳಿ ವತಿಯಿಂದ ಶಿಷ್ಠಾಚಾರ ಪ್ರಕಾರ ಗೋಪುರದ ಮುಂಭಾಗ ರಾಜ್ಯಪಾಲರನ್ನು ಸ್ವಾಗತಿಸಲಾಯಿತು. ಬಳಿಕ ಪೂರ್ಣಕುಂಭ ಮತ್ತು ಮಂಗಳವಾದ್ಯದ ನಿನಾದದೊಂದಿಗೆ ಅವರನ್ನು ದೇವಳದ ಒಳಗೆ ಕರೆದೊಯ್ಯಲಾಯಿತು.

ರಾಜ್ಯಪಾಲರು ಶೇಷ ಸೇವೆಯನ್ನು ಸುಬ್ರಹ್ಮಣ್ಯ ದೇವರಿಗೆ ಅರ್ಪಿಸಿದರು. ಹೊ ಸಳಿಗಮ್ಮನ ದರ್ಶನ: ಹೊ ಸಳಿಗಮ್ಮನ ದರ್ಶನ ಮಾಡಿದ ರಾಜ್ಯಪಾಲರು ಅರ್ಚನೆ ಸೇವೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದಲ್ಲಿ ಉಪಾಹಾರ ಸೇವಿಸಿ ತೆರಳಿದರು. ಅವರ ಪತ್ನಿ ಅನಿತಾ ಗೆಹ್ಲೋಟ್‌, ಮೊಮ್ಮಕ್ಕಳಾದ ಧೀರಜ್ ಗೆಹ್ಲೋಟ್‌, ರಜನಿ ಗೆಹ್ಲೋಟ್‌ ಇದ್ದರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಾಥೆ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!