Thursday, April 25, 2024
spot_imgspot_img
spot_imgspot_img

ಕೂದಲು ಉದುರುವ ಸಮಸ್ಯೆಯಿಂದ ನೊಂದ ಯುವತಿ ನೇಣಿಗೆ ಶರಣು

- Advertisement -G L Acharya panikkar
- Advertisement -

ಪರೀಕ್ಷೆ, ಪ್ರೀತಿ ಪ್ರೇಮ, ಸಾಲ, ಆರ್ಥಿಕ ಸಮಸ್ಯೆ ಹೀಗೆ ನಾನ ಸಮಸ್ಯೆಗಳಲ್ಲಿ ಸೋತು ಆತ್ಮಹತ್ಯೆ ಮಾಡಿಕೊಳ್ಳುವವರು ಒಂದೆಡೆಯಾದರೆ ಇಲ್ಲೊಬ್ಬಳು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಲೆ ಕೂದಲು ಉದುರುವ ಸಮಸ್ಯೆಯಿಂದ ಬೇಸರಗೊಂಡ ಯುವತಿ ನೇಣಿಗೆ ಶರಣಾಗಿರುವಂತಹ ಘಟನೆ ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿ ನಡೆದಿದೆ.

ಕಾವ್ಯಶ್ರೀ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹಲವು ದಿನಗಳಿಂದ ಅನಾರೋಗ್ಯದಿಂದ ಕಾವ್ಯಶ್ರೀ ಬಳಲುತ್ತಿದ್ದು, ನಿರಂತರವಾಗಿ ಕೂದಲು ಉದುರುತ್ತಿತ್ತು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಕೂದಲು ಸಂಪೂರ್ಣವಾಗಿ ಕಳೆದುಕೊಂಡ ಹಿನ್ನೆಲೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!