Friday, April 26, 2024
spot_imgspot_img
spot_imgspot_img

ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವತಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಬೇಲೂರು : 4 ವರ್ಷ ಅತಿಥಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸಿದ್ದರೂ, ಈ ಬಾರಿ ಮತ್ತೆ ಆಯ್ಕೆಯಾಗದ ಹಿನ್ನಲೆ ಹಾಸನದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.

ಮೃತರನ್ನು ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಉಮೆಯಾನಿ (30) ಎಂದು ಗುರುತಿಸಲಾಗಿದ್ದು, ಇವರು ಮಂಗಳವಾರ ರಾತ್ರಿ ತಮ್ಮ ತಾಯಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರಿನವರಾದ ಉಮೆಯಾನಿ ಕಳೆದ ಒಂದು ವರ್ಷದಿಂದ ಬೇಲೂರಿನ ವೈಡಿಡಿ ಪ್ರಥಮದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದಿದ್ದು, ಇವರು ಸಹ ಅರ್ಜಿ ಸಲ್ಲಿಸಿದ್ದರು. ಆದರೆ, ಇವರು ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದು ಚಿಕ್ಕಮಗಳೂರಿನ ತಮ್ಮ ತಾಯಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

vtv vitla
vtv vitla
- Advertisement -

Related news

error: Content is protected !!