Wednesday, April 24, 2024
spot_imgspot_img
spot_imgspot_img

ಕೊಕ್ಕಡ: ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಆರೋಪ; ಪ್ರಕರಣ ದಾಖಲು

- Advertisement -G L Acharya panikkar
- Advertisement -

ಬೆಳ್ತಂಗಡಿ: ಕೊಕ್ಕಡದಲ್ಲಿ ಬಾಡಿಗೆ ಮಾಡುವ ವಿಚಾರವಾಗಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೊಕ್ಕಡದ ರಿಕ್ಷಾ ಪಾರ್ಕ್‌ನಲ್ಲಿ ಚಾಲಕನಾಗಿರುವ ರಮೇಶ್‌ ಅವರು ತನ್ನ ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ಬಾಡಿಗೆ ಹೊರಟಾಗ ಮತ್ತೋರ್ವ ರಿಕ್ಷಾ ಚಾಲಕ ದಿನೇಶ್‌ ಎಂಬಾತ ತನ್ನ ಆಟೋ ರಿಕ್ಷಾವನ್ನು ಈತನ ರಿಕ್ಷಾಕ್ಕೆ ಅಡ್ಡವಾಗಿ ನಿಲ್ಲಿಸಿ ರಮೇಶ್‌ ಅವರನ್ನು ರಿಕ್ಷಾದಿಂದ ಹೊರಗೆಳೆದು ಜಾತಿನಿಂದನೆ ಮಾಡಿ ಹಲ್ಲೆ ನಡೆಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ಅದರಿಂದ ಇಳಿಸಿ ತನ್ನ ರಿಕ್ಷಾದಲ್ಲಿ ಕರೆದೊಯ್ದಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

vtv vitla
vtv vitla

ಗಾಯಗೊಂಡಿರುವ ರಮೇಶ್‌ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!