- Advertisement -
- Advertisement -
ನವದೆಹಲಿ: ಆಗಸ್ಟ್ 10 ರಂದು ದೆಹಲಿಯಲ್ಲಿ ನೂತನ ಮಾನ್ಯ ಕೇಂದ್ರ ಕೃಷಿ ಸಚಿವರಾದ ಕು.ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪ್ರಮುಖವಾಗಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಪಟ್ಟಂತೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಕೇಂದ್ರ ಸರ್ಕಾರದ ವತಿಯಿಂದ ಸಬ್ಸಿಡಿ ನೀಡುವಂತೆ ವಿನಂತಿಸಲಾಯಿತು. ಹಾಗೆಯೇ ಪುತ್ತೂರಿನಲ್ಲಿ ಮಣ್ಣು ಪರೀಕ್ಷಾ ಕೇಂದ್ರವನ್ನು ಸ್ಥಾಪಿಸುವಂತೆ ಮಾನ್ಯ ಸಚಿವರಲ್ಲಿ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು, ನಿರ್ದೇಶಕರಾದ ಶ್ರೀ ಬಾಲಕೃಷ್ಣ ಬಾಣಜಾಲು ಉಪಸ್ಥಿತರಿದ್ದರು.
- Advertisement -