- Advertisement -
- Advertisement -
ಬೆಂಗಳೂರು: ಕರ್ನಾಟಕದ ನಾಲ್ವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಪ್ರಧಾನಿ ಮೋದಿಯವರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ 6 ಕ್ಕೆ ನಡೆಯಲಿದೆ. ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಮತ್ತು ಬೀದರ್ ಸಂಸದ ಭಗವಂತ್ ಖೂಭಾ ಅವರು ಸಚಿವರ ಪರಿಷತ್ಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಂದ್ರಶೇಖರ್, ಶೋಭಾ ಮತ್ತು ನಾರಾಯಣಸ್ವಾಮಿ ಅವರು ಬೆಳಿಗ್ಗೆ ಪ್ರಧಾನ ಮಂತ್ರಿಯವರು ಕರೆದಿದ್ದ ಹೊಸದಾಗಿ ಸೇರ್ಪಡೆಗೊಂಡ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು. ಭಗವಂತ್ ಖೂಭಾ ಅವರಿಗೆ ಇಂದು ಪ್ರಧಾನಿ ಕಚೇರಿಯಿಂದ ಕರೆ ಬಂದಿದೆ. ಭಗವಂತ್ ಖೂಭಾ ಹೈದರಾಬಾದ್ ನಿಂದ ದೆಹಲಿಗೆ ತೆರಳುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಗರಿಷ್ಠ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರಕಿರುವುದು ಬಹುತೇಕ ಖಚಿತವಾಗುತ್ತಿದೆ.
- Advertisement -