- Advertisement -
- Advertisement -
ದೆಹಲಿ: ನಿನ್ನೆ ನಾಗರಿಕ ಸೇವಾ ದಿನ ಹಿನ್ನೆಲೆ ಕೇಂದ್ರ ಸರ್ಕಾರವು 2021ರ ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಗಾಗಿ ನೀಡುವ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ.ಅಡೆತಡೆಯಿಲ್ಲದ, ಮೊದಲಿನಿಂದ ಕೊನೆತನಕ ಮಾನವ ಮಧ್ಯಪ್ರವೇಶವಿಲ್ಲದ ಸೇವೆ ನೀಡಿಕೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ (Seva Sindhu Portal) ಪ್ರಶಸ್ತಿಗೆ ಆಯ್ಕೆಯಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಕರ್ನಾಟಕ ಸರ್ಕಾರದ ಪರವಾಗಿ ಐಎಎಸ್ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದ್ದಾರೆ.
- Advertisement -