- Advertisement -
- Advertisement -

ಬೆಳ್ತಂಗಡಿ : ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಬೆಳ್ತಂಗಡಿಯ ಉಜಿರೆ ಮಾಚಾರು ಮೂಲದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಚಾರು ಕುದುರು ನಿವಾಸಿಯಾಗಿರುವ ಅಶ್ರಫ್ ಮೃತ ದುರ್ದೈವಿಯಾಗಿದ್ದಾರೆ.
ಇವರು ಜೂನ್ 4ರಂದು ಪತ್ನಿ ಮತ್ತು ತನ್ನಿಬ್ಬರು ಮಕ್ಕಳನ್ನು ಕೇರಳದ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾಗ ಕಣ್ಣೂರು ಜಿಲ್ಲೆ ಪಯ್ಯಂಗಡಿಯಲ್ಲಿ ರಸ್ತೆ ದಾಟುವ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಅಶ್ರಫ್ ಮೃತಪಟ್ಟಿದ್ದಾರೆ. ಮೃತರು ಉಪ್ಪಿನಂಗಡಿಯಲ್ಲಿ ಬ್ರೈಟ್ ಲುಕ್ ವಸ್ತ್ರ ಮಳಿಗೆ ನಡೆಸುತ್ತಿದ್ದು , ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -