- Advertisement -
- Advertisement -
ಲುಂಗಿ ಧರಿಸಿದ ಕಾರಣಕ್ಕೆ ಕೇರಳದ ನಾಲ್ವರು ವಿದ್ಯಾರ್ಥಿಗಳ ಮೇಲೆ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದೆ.
ಈ ಕುರಿತು ಕೇರಳದ ರಾಜ್ಯಸಭೆ ಸದಸ್ಯ ಎ ಎ ರಹೀಮ್ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದಾರೆ.
ವಿಶ್ವವಿದ್ಯಾಲಯದ ದೌಲತ್ ರಾಮ್ ಕಾಲೇಜ್ ಮುಂದೆ ಕೇರಳದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿಗಳು ಲುಂಗಿ ಧರಿಸಿಕೊಂಡು ತಮ್ಮ ರೂಮ್ಗಳಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೂವರು ಬೈಕ್ ಮೇಲೆ ಬಂದು, ನೀವೇಕೆ ಲುಂಗಿ ಧರಿಸಿದ್ದೀರಿ? ಇಂಥದ್ದೆಲ್ಲ ಧರಿಸಿಕೊಂಡು ತಿರುಗಾಡುವ ಸ್ಥಳ ಇದಲ್ಲ ಎಂದು ಅವರನ್ನು ಥಳಿಸಿದ್ದಾರೆ. ಬೆಲ್ಟ್ನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ರಾಷ್ಟ್ರ ರಾಜಧಾನಿಯ ಪ್ರಮುಖ ವಿಶ್ವವಿದ್ಯಾಲಯದಲ್ಲಿ ಈ ರೀತಿಯ ದ್ವೇಷ ಪ್ರಕರಣಗಳು ನಡೆಯುತ್ತಿರುವುದು ಖಂಡನೀಯ. ಈ ಘಟನೆಯ ಬಗ್ಗೆ ಪೂರ್ಣ ತನಿಖೆ ಮಾಡಿ, ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
- Advertisement -