- Advertisement -
- Advertisement -

ವಿಜಯಪುರ: ಕೇವಲ 500 ರೂಪಾಯಿಗಾಗಿ ನಾಲ್ಕು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಹತ್ಯೆಗೈದು ಪರಾರಿಯಾಗಿದೆ. ವಿಜಯಪುರದ ಜಾಡರ ಓಣಿಯಲ್ಲಿ ಘಟನೆ ನಡೆದಿದ್ದು, ನಿವಾಸಿ ಭೀಮ್ಸಿ ಪಾತ್ರೋಟಿ ಮೃತ ದುರ್ದೈವಿ ಎನ್ನಲಾಗಿದೆ.

ನಾಲ್ವರು ಸೇರಿಕೊಂಡು ಭೀಮ್ಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.




- Advertisement -








