Monday, April 29, 2024
spot_imgspot_img
spot_imgspot_img

ಕೈ ಕಮಲ ಕೂಟಕ್ಕೆ ಸಿಂಹಸ್ವಪ್ನವಾಗುತ್ತರಾ ಅರುಣ್‌ ಕುಮಾರ್‌ ಪುತ್ತಿಲ; ಸ್ವತಂತ್ರ ಅಭ್ಯರ್ಥಿಯಾಗಿ ಎ 17ರಂದು ನಾಮಪತ್ರ ಸಲ್ಲಿಕೆ

- Advertisement -G L Acharya panikkar
- Advertisement -
vtv vitla

ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದೇ ಇರುವುದರಿಂದ ಬೇಸರಗೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಏಪ್ರಿಲ್ 15 ರಂದು ಪತ್ರಿಕಾಗೋಷ್ಠಿ ಕರೆದು ತಮ್ಮ ನಿಲುವನ್ನು ಪ್ರಕಟಿಸಿರುವ ಅರುಣ್‌ ಕುಮಾರ್ ಪುತ್ತಿಲ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಎ 17ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

- Advertisement -

Related news

error: Content is protected !!