- Advertisement -
- Advertisement -
ಕೊಡಗು: ಇಲ್ಲಿನ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ತಂದೆಯೇ ಮಗನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ನಂದೇಟಿರ ನಿರನ್ (28) ಮೃತ ದುರ್ದೈವಿ.
ನಿರನ್ ತಂದೆ ನಂದೇಟಿರ ಚಿಟ್ಟಿಯಪ್ಪ (58) ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಂಗಳೂರುನಲ್ಲಿ ಕೆಲಸದಲ್ಲಿದ್ದ ಮಗ, ಎರಡು ತಿಂಗಳ ಹಿಂದೆಯಷ್ಟೆ ಮನೆಗೆ ಬಂದಿದ್ದಾರೆ. ತಂದೆತಾಯಿಯ ಜೊತೆ ದಿನ ಕುಡಿದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -