Friday, March 29, 2024
spot_imgspot_img
spot_imgspot_img

ಕೊಡಗು ಜಿಲ್ಲೆಯಾದ್ಯಂತ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ

- Advertisement -G L Acharya panikkar
- Advertisement -

ಮಡಿಕೇರಿ: ಆಗಸ್ಟ್ 26ರಂದು ಮಡಿಕೇರಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ವಿಧಿಸಲಾಗಿದೆ.

 ಆ.26ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ಮತ್ತೊಂದು ಕಡೆ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆ.24 ಬೆಳಗ್ಗೆ 6 ಗಂಟೆಯಿಂದ ಆ.27 ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ಸತೀಶ್‌ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಯ್ಯಪ್ಪ ಅವರ ಮನವಿಯ ಮೇರೆಗೆ ಜಿಲ್ಲಾಧಿಕಾರಿಗಳು ಈ ಆದೇಶ ಮಾಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಪಕ್ಷದ ಕಾರ್ಯಕರ್ತರು, ಕಪ್ಪು ಬಾವುಟ ತೋರಿಸಿ, ಘೋಷಣೆ ಕೂಗಿ, ಸಾವರ್ಕರ್‌ ಚಿತ್ರ ತೋರಿಸಿ, ಮೊಟ್ಟೆಎಸೆದಿರುವ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವತಿಯಿಂದ ಆ.26ರಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಪ್ರತಿಭಟನೆ ಸುಮಾರು ಲಕ್ಷ ಜನರು ಸೇರಿಸುವುದಾಗಿ ತಿಳಿಸಿದ್ದಾರೆ. ಇತರೆ ಜಿಲ್ಲೆಗಳಿಂದ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ತಂಡ ತಂಡವಾಗಿ ಆಗಮಿಸುವ ಮಾಹಿತಿಯಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದಿಂದ ನಿಷೇಧಾಜ್ಞೆ ವಿಧಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ 4 ದಿನಗಳ ಕಾಲ ಯಾವುದೇ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನ ಹಾಗೂ ಯಾವುದೇ ರ್‍ಯಾಲಿ ನಡೆಸುವಂತಿಲ್ಲ. ಅಲ್ಲದೇ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.

- Advertisement -

Related news

error: Content is protected !!