ಕೊಡಗು: ವ್ಯಾಪಾರದಲ್ಲಿ ಉಂಟಾದ ಹಿನ್ನಲೆ ಮನೊಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಡಗಿನ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ. ಎಚ್.ಕೆ ಸಂದೀಪ್ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸಕಲೇಶಪುರ ತಾಲೂಕಿನ ಹಡ್ಲಹಳ್ಳಿ ಗ್ರಾಮದ ನಿವಾಸಿಯಾದ ಸಂದೀಪ್ ಪಟ್ಟಣಕ್ಕೆ ಬಂದು ಕಳೆದ 20 ವರ್ಷಗಳಿಂದಲೂ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ನಾಪೋಕ್ಲು ಪಟ್ಟಣದಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆರ್.ಎಚ್. ಬಟ್ಟೆಮಳಿಗೆ ನಡೆಸುತ್ತಿದ್ದ ಸಂದೀಪ್ ವ್ಯಾಪಾರ ಮೊದಲು ಚೆನ್ನಾಗಿಯೇ ನಡೆದಿತ್ತು. ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ವ್ಯಾಪಾರದಲ್ಲಿ ನಷ್ಟದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಳಗ್ಗೆ 7.30ಕ್ಕೆ ಸ್ನೇಹಿತ ಸಂದೇಶ ಎಂಬುವವರಿಗೆ ಕರೆ ಮಾಡಿದ್ದ ಸಂದೀಪ 9 ಗಂಟೆಗೆ ಮನೆಗೆ ಬರುವಂತೆ ತಿಳಿಸಿದ್ದ. ಬೆಳಗ್ಗೆ 9 ಗಂಟೆಗೆ ಸಂದೇಶ್ ಮನೆಗೆ ತೆರಳಿದಾಗ ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಸಂದೇಶ್ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.