- Advertisement -
- Advertisement -
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಕಡಿಮೆಯಾಗದ ಹಿನ್ನೆಲೆ ಈಗಾಗಲೇ ಜಾರಿಯಲ್ಲಿದ್ದ ಲಾಕ್ಡೌನ್ನ್ನು ಮತ್ತೊಂದು ವಾರ ಮುಂದುವರೆಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ.
ಏಪ್ರಿಲ್ 19 ರಂದು ಅರವಿಂದ್ ಕೇಜ್ರಿವಾಲ್ ಒಂದು ವಾರ ಕಾಲ ಲಾಕ್ಡೌನ್ ಘೋಷಣೆ ಮಾಡಿದ್ದರು. ಬಳಿಕ ಏಪ್ರಿಲ್ 25 ರಂದು ಮತ್ತೊಂದು ವಾರ ಲಾಕ್ಡೌನ್ ಘೋಷಿಸಿ ಆದೇಶ ಹೊರಡಿಸಿದ್ರು. ಇದೀಗ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇದೀಗ ಮತ್ತೊಂದು ವಾರದ ಲಾಕ್ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ದೆಹಲಿಯಲ್ಲಿ ಸೋಂಕು ಪ್ರಕರಣಗಳ ಏರಿಕೆ ಮಾತ್ರವಲ್ಲದೇ ಆಕ್ಸಿಜನ್, ಐಸಿಯು ಬೆಡ್, ವೆಂಟಿಲೇಟರ್ಗಳ ಸಮಸ್ಯೆಯೂ ಎದುರಾಗಿದ್ದು ಈ ಕುರಿತು ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತ್ತು. ನಿಮ್ಮಿಂದ ಆಕ್ಸಿಜನ್ ಪ್ಲಾಂಟ್ಗಳ ನಿರ್ವಹಣೆ ಮಾಡಲಾಗದಿದ್ರೆ ಹೇಳಿ.. ಅದನ್ನ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ನೀಡ್ತೇವೆ ಎಂದು ಕೋರ್ಟ್ ಹೇಳಿತ್ತು.
- Advertisement -