Friday, May 17, 2024
spot_imgspot_img
spot_imgspot_img

ಕೊರೊನಾ ಹಿನ್ನೆಲೆ; ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಶಾಲೆಗಳು ಬಂದ್..!

- Advertisement -G L Acharya panikkar
- Advertisement -
vtv vitla
vtv vitla
suvarna gold

ಮಂಗಳೂರು: ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿರುವ ಹಿನ್ನೆಲೆ ಜಿಲ್ಲೆಯ ಹತ್ತು ಶಾಲೆಗಳನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಐದಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಪತ್ತೆಯಾದಲ್ಲಿ ಅಂತಹ ಶಾಲೆಗಳನ್ನು ಬಂದ್ ಮಾಡಿ ಆನ್ ಲೈನ್ ಶಿಕ್ಷಣವನ್ನು ನೀಡುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದರು. ಅದರಂತೆ ಐದಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದ ಶಾಲೆಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 288 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

vtv vitla

ಪುತ್ತೂರು-ಉದನೆ ಬಿಷಪ್ ಪೋಲಿಕಾರ್ಷಸ್ ಪಬ್ಲಿಕ್ ಸ್ಕೂಲ್ – 6 ಮಕ್ಕಳು ಹಾಗೂ ಓರ್ವ ಶಿಕ್ಷಕನಿಗೆ ಸೋಂಕು ಪತ್ತೆಯಾಗಿದೆ.
ಶಿರಾಡಿ ಸೈಂಟ್ ಅಂಟೋನಿ ಪ್ರೌಢ ಶಾಲೆ – ಮೂವರಿಗೆ ಪಾಸಿಟಿವ್ ದೃಢಪಟ್ಟಿದೆ.
ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ – 6 ಮಂದಿಗೆ ಪಾಸಿಟಿವ್ ಪತ್ತೆಯಾಗಿದೆ.
ಹೀರಾ ಆಂಗ್ಲ ಮಾಧ್ಯಮ ಹಿ. ಪ್ರಾ. ಶಾಲೆ ಪೆರ್ಮನ್ನೂರು-ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಂಗಳೂರು ಸೈಂಟ್ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಓರ್ವನಿಗೆ ಪಾಸಿಟಿವ್ ಪತ್ತೆ. ಈ ಹಿನ್ನೆಲೆ ಕೇವಲ 10ನೇ ತರಗತಿ ಮಾತ್ರ ಬಂದ್ ಮಾಡಲಾಗಿದೆ.

ಬುಧವಾರದಂದು ತಾತ್ಕಾಲಿಕ ಮುಚ್ಚಲ್ಪಟ್ಟ ಶಾಲೆಗಳ ವಿವರ:
ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್ ಇ ಡೊಂಗ್ರಕೇರಿ,
ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ,
ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ,
ವಿವೇಕಾನಂದ ಪಿಯು ಕಾಲೇಜು ಎಡಪದವು,
ಸರಕಾರಿ ಪ್ರೌಢ ಶಾಲೆ ಮುಂಚೂರು – 1 ವಾರಗಳ ಕಾಲ ಬಂದ್

- Advertisement -

Related news

error: Content is protected !!