- Advertisement -
- Advertisement -
ನವದೆಹಲಿ: ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಪ್ರತಿಷ್ಠಾನದ ಮೂಲಕ ದೆಹಲಿಯ ಕೋವಿಡ್ ಸೋಂಕಿತರಿಗೆ ಉಚಿತವಾಗಿ ಆಂಟಿ-ವೈರಲ್ ಡ್ರಗ್ ಫ್ಯಾಬಿಫ್ಲೂ ಮತ್ತು ಆಮ್ಲಜನಕ ಸಿಲಿಂಡರ್ಗಳನ್ನು ವಿತರಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ದೆಹಲಿ ನನ್ನ ಮನೆ, ನನ್ನ ಕೊನೆಯ ಉಸಿರು ಇರುವ ತನಕ ಜನರ ಸೇವೆಯನ್ನು ಮಾಡುತ್ತೇನೆ. ಆಕ್ಸಿಜನ್, ಬೆಡ್ ಮತ್ತು ಔಷಧ ಸಹಾಯ ಮಾಡಿ ಎಂದು ಹಲವರು ಮನವಿ ಮಾಡಿದ್ದಾರೆ. ನನಗೆ ಸಾಧ್ಯವಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿತರು ಆಕ್ಸಿಜನ್ ಫ್ಯಾಬಿಫ್ಲೂ, ಔಷಧಗಳನ್ನು ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಬರಬೇಕು ಎಂದು ಸೂಚನೆ ನೀಡಲಾಗಿದೆ. ಕೊರೊನಾ ಸೊಂಕಿತರಿಗೆ ಉಚಿತವಾಗಿ ವೈದ್ಯಕೀಯ ಅಗತ್ಯತೆಯನ್ನು ಪೂರೈಸಲು ಗೌತಮ್ ಗಂಭೀರ್ ಮುಂದಾಗಿದ್ದಾರೆ.
- Advertisement -