ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಬಳಸಿದ್ದ ಆರೋಪದ ಮೇಲೆ ಕೊರಗ ಸಮುದಾಯದ ಮೇಲೆ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿಎಸ್ ಐ ಸಂತೋಷ್ ಗೆ ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶಿಸಿದ್ದಾರೆ. 5 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಮುಂದಿನ ಆದೇಶದವರೆಗೆ ಠಾಣೆಯಿಂದ ಎತ್ತಂಗಡಿ ಮಾಡಲಾಗಿದೆ.
ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ನಡೆದಿದ್ದು ಕೊರಗ ಸಮುದಾಯದವರ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರು ಅವಧಿ ಮೀರಿ ಡಿಜೆ ಬಳಸಿದ್ದಕ್ಕೆ ಮನೆಯವರಿಗೆ ಲಾಠಿ ಬೀಸಿ ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿದೆ. ಈ ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಕೋಟ ಪಿಎಸ್ಐ ಸೇರಿದಂತೆ ಐವರು ಸಿಬ್ಬಂದಿಗಳನ್ನು ಠಾಣೆಯಿಂದ ಎತ್ತಂಗಡಿ ಮಾಡಿದ್ದರು. ನಂತರ ಪ್ರಕರಣದ ತನಿಖೆಗೆ ಆದೇಶಿಸಿದ್ದರು.
ಇದನ್ನೂ ಓದಿ: ಕೋಟ: ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ಲಾಠಿ ಚಾರ್ಜ್!!
ಪಶ್ಚಿಮ ವಲಯ ಐಜಿಪಿ ಜ್ಯೋತಿ ಪ್ರಕಾಶ್ ರೈ ಅವರು ಎಸ್ ಐ ಅವರನ್ನು ಅಮಾನತು ಮಾಡಿ ಉಳಿದ ಐವರು ಪೊಲೀಸರಿಗೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ