Monday, April 29, 2024
spot_imgspot_img
spot_imgspot_img

ಕೋಟ: ಪಡಿತರ ಅಕ್ಕಿಗಾಗಿ ಅಕ್ಕ-ತಂಗಿಯ ಹೊಡೆದಾಟ; ಅಕ್ಕ ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಕೋಟ: ಪಡಿತರ ಅಕ್ಕಿಗಾಗಿ ಅಕ್ಕ-ತಂಗಿ ನಡುವೆ ಹೊಡೆದಾಟ ನಡೆದು ಅಕ್ಕ ಆಸ್ಪತ್ರೆಗೆ ದಾಖಲಾದ ಘಟನೆ ವಡ್ಡರ್ಸೆ ಎಂ.ಜಿ ಕಾಲನಿಯಲ್ಲಿ ನಡೆದಿದೆ. ಜ್ಯೋತಿ (32) ಗಾಯಗೊಂಡ ಗೃಹಿಣಿ.

ಜ್ಯೋತಿಯವರು ಪತಿ ಹಾಗೂ ಮಕ್ಕಳೊಂದಿಗೆ ಬಿದ್ಕಲ್‌ ಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಬೆಳಗ್ಗೆ ವಡ್ಡರ್ಸೆ ಗ್ರಾಮದ ಎಂ.ಜಿ. ಕಾಲನಿಯಲ್ಲಿರುವ ತನ್ನ ತಾಯಿ ಮನೆಗೆ ಬಂದಾಗ, ತಾಯಿಯು ಮನೆಯಲ್ಲಿ ಇರದೇ ಕೆಲಸಕ್ಕೆ ಹೋಗಿದ್ದು, ಮನೆಯಲ್ಲಿ ತಂಗಿ ಆಶಾ ಇದ್ದು ಅವಳಲ್ಲಿ ಸರಕಾರದಿಂದ ಸಿಗುವ ಉಚಿತ ಪಡಿತರ ಅಕ್ಕಿಯಲ್ಲಿ ತನ್ನ ಪಾಲಿಗೆ ಬಂದ ಅಕ್ಕಿಯನ್ನು ನೀಡುವಂತೆ ಕೇಳಿದಾಗ ಆಶಾ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮಾತಿಗೆ ಮಾತು ಬೆಳೆದು ಜ್ಯೋತಿಯವರಿಗೆ ಮರದ ದೊಣ್ಣೆಯಿಂದ ಹೊಡೆದಿದ್ದಾರೆ.

ತೀವ್ರವಾಗಿ ಗಾಯಗೊಂಡ ಅವರನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಅಲ್ಲಿಂದ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಪ್ರಕರಣದ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!